ಬೆಂಗಳೂರು: ಯಾರೋ ಕಟ್ಟಿದ ಕೋಟೆಯನ್ನು ತನ್ನದು ಎಂದು ಮೊಂಡುವಾದ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಜಾಯಮಾನ ಎಂದು ಬಿಜೆಪಿಕಿಡಿಕಾರಿದೆ.
ಬೆಂಗಳೂರಿನ ಬಡವರಿಗೆ ನಿರ್ಮಿಸಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಎಪಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.
ಯಾರೋ ಕಟ್ಟಿದ ಕೋಟೆಯನ್ನು ತನ್ನದು ಎಂದು ಮೊಂಡುವಾದ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಜಾಯಮಾನ. ಕೇಂದ್ರ ಸರ್ಕಾರ ನೀಡುತ್ತಿದ್ದ ಅಕ್ಕಿಗೆ ತಮ್ಮ ಹೆಸರನ್ನು ಲೇಬಲ್ ಮಾಡಿ, ಅಕ್ಕಿ ಕೊಟ್ಟಿದ್ದು ತಾವು ಎಂದು ಸುಳ್ಳು ಹೇಳಿದ್ದ ಸಿದ್ದರಾಮಯ್ಯ, ಈಗ ಆ ಸುಳ್ಳಿನ ಸರಣಿಯನ್ನು ಮುಂದುವರಿಸಿದ್ದಾರೆ.
ಪಿಎಂ ಆವಾಸ್ ಯೋಜನೆಯಡಿ ಬೆಂಗಳೂರಿನ ಬಡವರಿಗೆ ನಿರ್ಮಿಸಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಸಹ ಈಗ ತಮ್ಮದು ಎಂದು ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಅಂದ ಹಾಗೆ, ಯಾರದೋ ಶ್ರಮದ ಫಲವನ್ನು ತಮ್ಮದು ಎಂದು ಕ್ರೆಡಿಟ್ ತೆಗೆದುಕೊಳ್ಳುವ ಈ ಬುದ್ದಿಯನ್ನು ನೀವು ಕಲಿತಿದ್ದಾದರೂ ಎಲ್ಲಿಂದ ಸಿದ್ದರಾಮಯ್ಯ ಅವರೇ..?? ಉತ್ತರಿಸಿ ಎಂದಿದೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…