ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ.
ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಈ ಸಭೆಯಲ್ಲಿ ಚರ್ಚಿಸಿ ಮಹತ್ವದ ನಿರ್ಣಯ ಕೈಗೊಳ್ಳುವುದೊಂದೇ ಬಾಕಿ ಉಳಿದಿದೆ.
ಇನ್ನು ಡಿ.ಕೆ.ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ಹೊಸ ನಾಯಕನಾಗಿ ಆಯ್ಕೆ ಮಾಡುವುದು ಖಚಿತವಾಗಿದೆ.
ರಾಜ್ಯಸಭೆ ಚುನಾವಣೆಗೂ ಮೊದಲೇ ಸಿಎಂ ಬದಲಾವಣೆಗೆ ಹೈಕಮಾಂಡ್ ಮುಹೂರ್ತ ಇಟ್ಟಿದೆ. ರಾಹುಲ್ ಮಾತು ಪಾಲಿಸಲು ಮುಂದಾದ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನೂ ಸೈ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯಸಭೆಗೆ ಸಿದ್ದರಾಮಯ್ಯರನ್ನು ಕರೆಸಿಕೊಳ್ಳುವ ಲೆಕ್ಕಾಚಾರದಲ್ಲಿ ಹೈಕಮಾಂಡ್ ನಾಯಕರು ಇದ್ದಾರೆ.





