ರಾಜ್ಯ

ಸಿದ್ದರಾಮಯ್ಯ ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.

ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ ಅವರು.

ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ಎಂದು ಸಿಎಂ ಅವರ ಕಾಲೆಳೆದಿದ್ದಾರೆ ಸಚಿವರು.

ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಎಚ್‌ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

11 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

14 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

27 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago