ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.
ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ ಅವರು.
ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ಎಂದು ಸಿಎಂ ಅವರ ಕಾಲೆಳೆದಿದ್ದಾರೆ ಸಚಿವರು.
ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಎಚ್ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…