ರಾಜ್ಯ

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು.

ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ಪಾರದರ್ಶಕ ತನಿಖೆಗೆ ಸಹಕರಿಸಬೇಕು ಎಂದು ಹೇಳಿದರು.

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಡಳಿತಾವಧಿಯಲ್ಲಿನ ಪ್ರಕರಣಗಳನ್ನು ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ತಿಂಗಳಿನಿಂದ ಹೇಳಿಕೆ ನೀಡುತ್ತಲೇ ಬರುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಅವಧಿಯಲ್ಲಿನ ಹಗರಣಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕೂಡಲೇ ತನಿಖೆ ನಡೆಸಿ ಫಲಿತಾಂಶ ಹೊರಡಿಸಲಿ ಎಂದು ಬಹಿರಂಗ ಸವಾಲು ಹಾಕಿದರು.

ಇನ್ನು ಬಿಜೆಪಿಯಲ್ಲಿ ಎರಡು ಬಣಗಳಾಗಿದ್ದು, ಕೆಲವರು ಪ್ರತ್ಯೇಕ ಪಾದಯಾತ್ರೆಗೆ ಸಿದ್ದತೆ ನೆಡಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪಕ್ಷಕ್ಕೆ ಶಕ್ತಿ ಬರುತ್ತದೆ ಎಂದಾದರೇ ಮಾಡಲಿ ಇದಕ್ಕೆ ನಮ್ಮ ತಕರಾರು ಏನಿಲ್ಲ. ಈ ಎಲ್ಲದರ ಬಗ್ಗೆ ಹೈ ಕಮಾಂಡ್‌ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅವರು ಏನೇ ಮಾಡಿದರು ಪಕ್ಷಕ್ಕೆ ಪೂರಕವಾಗಿ ಸಂಘಟನೆಗೆ ಲಾಭವಾಗುವುದಾದರೇ ಮಾಡಲಿ ಎಂದು ನುಣುಚಿಕೊಂಡರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

10 mins ago

ಶಾಸಕ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್:‌ ಜಾಮೀನು ಮಂಜೂರು

ನವದೆಹಲಿ: ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು…

20 mins ago

ತಮಿಳುನಾಡು ಮಾಜಿ ಸಿಎಂ ಪನ್ನೀರ್‌ ಸೆಲ್ವಂ ಡಿಎಂಕೆಗೆ ಸೇರ್ಪಡೆ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್…

53 mins ago

ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾಗೆ ಬಿಗ್‌ ರಿಲೀಫ್

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ…

1 hour ago

ಮಾರ್ಚ್.‌3ರಂದು ಚಂದ್ರಗ್ರಹಣ: ದೇವಾಲಯ ದರ್ಶನ ಸಮಯ ಬದಲು

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ…

1 hour ago

ಹುಣಸೂರು: ತಾಲ್ಲೂಕು ಕಚೇರಿ ಹಿಂಭಾಗದಲ್ಲಿ ಹೊತ್ತಿ ಉರಿದ ಗಿಡಮರಗಳು !

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ…

1 hour ago