ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು.
ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ಪಾರದರ್ಶಕ ತನಿಖೆಗೆ ಸಹಕರಿಸಬೇಕು ಎಂದು ಹೇಳಿದರು.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಡಳಿತಾವಧಿಯಲ್ಲಿನ ಪ್ರಕರಣಗಳನ್ನು ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ತಿಂಗಳಿನಿಂದ ಹೇಳಿಕೆ ನೀಡುತ್ತಲೇ ಬರುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಅವಧಿಯಲ್ಲಿನ ಹಗರಣಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡಲೇ ತನಿಖೆ ನಡೆಸಿ ಫಲಿತಾಂಶ ಹೊರಡಿಸಲಿ ಎಂದು ಬಹಿರಂಗ ಸವಾಲು ಹಾಕಿದರು.
ಇನ್ನು ಬಿಜೆಪಿಯಲ್ಲಿ ಎರಡು ಬಣಗಳಾಗಿದ್ದು, ಕೆಲವರು ಪ್ರತ್ಯೇಕ ಪಾದಯಾತ್ರೆಗೆ ಸಿದ್ದತೆ ನೆಡಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪಕ್ಷಕ್ಕೆ ಶಕ್ತಿ ಬರುತ್ತದೆ ಎಂದಾದರೇ ಮಾಡಲಿ ಇದಕ್ಕೆ ನಮ್ಮ ತಕರಾರು ಏನಿಲ್ಲ. ಈ ಎಲ್ಲದರ ಬಗ್ಗೆ ಹೈ ಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅವರು ಏನೇ ಮಾಡಿದರು ಪಕ್ಷಕ್ಕೆ ಪೂರಕವಾಗಿ ಸಂಘಟನೆಗೆ ಲಾಭವಾಗುವುದಾದರೇ ಮಾಡಲಿ ಎಂದು ನುಣುಚಿಕೊಂಡರು.
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…