ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದರು.
ನಗರದಲ್ಲಿಂದು (ಆ.13) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ಪಾರದರ್ಶಕ ತನಿಖೆಗೆ ಸಹಕರಿಸಬೇಕು ಎಂದು ಹೇಳಿದರು.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಡಳಿತಾವಧಿಯಲ್ಲಿನ ಪ್ರಕರಣಗಳನ್ನು ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ತಿಂಗಳಿನಿಂದ ಹೇಳಿಕೆ ನೀಡುತ್ತಲೇ ಬರುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಅವಧಿಯಲ್ಲಿನ ಹಗರಣಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡಲೇ ತನಿಖೆ ನಡೆಸಿ ಫಲಿತಾಂಶ ಹೊರಡಿಸಲಿ ಎಂದು ಬಹಿರಂಗ ಸವಾಲು ಹಾಕಿದರು.
ಇನ್ನು ಬಿಜೆಪಿಯಲ್ಲಿ ಎರಡು ಬಣಗಳಾಗಿದ್ದು, ಕೆಲವರು ಪ್ರತ್ಯೇಕ ಪಾದಯಾತ್ರೆಗೆ ಸಿದ್ದತೆ ನೆಡಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪಕ್ಷಕ್ಕೆ ಶಕ್ತಿ ಬರುತ್ತದೆ ಎಂದಾದರೇ ಮಾಡಲಿ ಇದಕ್ಕೆ ನಮ್ಮ ತಕರಾರು ಏನಿಲ್ಲ. ಈ ಎಲ್ಲದರ ಬಗ್ಗೆ ಹೈ ಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಅವರು ಏನೇ ಮಾಡಿದರು ಪಕ್ಷಕ್ಕೆ ಪೂರಕವಾಗಿ ಸಂಘಟನೆಗೆ ಲಾಭವಾಗುವುದಾದರೇ ಮಾಡಲಿ ಎಂದು ನುಣುಚಿಕೊಂಡರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…