Mysore
22
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಎಂಎಲ್‌ಸಿ ರವಿಕುಮಾರ್‌ ನಾಲಿಗೆ ಉದ್ದವಾಗಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

siddaramaiah reaction on mlc ravikumar statement

ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ಕಾರ್ಯದರ್ಶಿ ವಿರುದ್ಧ ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಪ್ರಶ್ನೆ ಎದುರಾಗುತ್ತಿದ್ದಂತೆ ಅವರ ನಾಲಿಗೆ ಜಾಸ್ತಿಯಾಯಿತು ಎಂದು ಸಿಟ್ಟಾದರು. ಹೆಚ್ಚಿನ ಪ್ರತಿಕ್ರಿಯೆ ನೀಡದೇ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಿ ಅಲ್ಲಿಂದ ನಿರ್ಗಮಿಸಿದರು.

ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಎನ್.ರವಿಕುಮಾರ್ ಅವರ ನಾಲಗೆ ಉದ್ದವಾಯಿತು ಎಂಬರ್ಥದಲ್ಲಿ ಸಿಡಿಮಿಡಿ ವ್ಯರ್ಥಪಡಿಸಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

Tags:
error: Content is protected !!