ರಾಜ್ಯ

ಪಾಕ್‌ ಪರ ಘೋಷಣೆ ಆರೋಪ; ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ನಿನ್ನೆ ( ಫೆಬ್ರವರಿ 27 ) ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆ ಸದಸ್ಯರು ಮತದಾನ ಮಾಡಿದರು. ಈ ಪೈಕಿ ಓರ್ವ ಬಿಜೆಪಿ ಅಭ್ಯರ್ಥಿ ಹಾಗೂ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದರು. ಇನ್ನು ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಸಂಭ್ರಮಾಚರಣೆ ವೇಳೆ ಬೆಂಬಲಿಗರಲ್ಲಿ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದರು ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ವಿಡಿಯೊ ಸಹ ಹರಿದಾಡುತ್ತಿದೆ. ಇನ್ನು ಕಾಂಗ್ರೆಸ್‌ನ ಕೆಲವರು ಇದರಲ್ಲಿ ನಾಸಿರ್‌ ಹುಸೇನ್‌ ಜಿಂದಾಬಾದ್‌ ಹಾಗೂ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಕೂಗುತ್ತಿದ್ದಾರೆಯೋ ಹೊರತು ಪಾಕಿಸ್ತಾನ ಜಿಂದಾಬಾದ್‌ ಎಂದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಸ್ವತಃ ನಾಸಿರ್ ಹುಸೇನ್‌ ಸಹ ಈ ಕುರಿತು ಮಾತನಾಡಿ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಒಂದುವೇಳೆ ಯಾರಾದರೂ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.

ಸದ್ಯ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಮಾತನಾಡಿದ್ದು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ತಿಳಿಸಿದರು. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬುದು ಮೊದಲು ಸಾಬೀತಾಗಬೇಕಿದೆ. ಅದಕ್ಕಾಗಿ ವಿಡಿಯೊ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇನೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

andolana

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

5 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

5 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

5 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

6 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

7 hours ago