ರಾಜ್ಯ

ಪಾಕ್‌ ಪರ ಘೋಷಣೆ ಆರೋಪ; ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ನಿನ್ನೆ ( ಫೆಬ್ರವರಿ 27 ) ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆ ಸದಸ್ಯರು ಮತದಾನ ಮಾಡಿದರು. ಈ ಪೈಕಿ ಓರ್ವ ಬಿಜೆಪಿ ಅಭ್ಯರ್ಥಿ ಹಾಗೂ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದರು. ಇನ್ನು ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಸಂಭ್ರಮಾಚರಣೆ ವೇಳೆ ಬೆಂಬಲಿಗರಲ್ಲಿ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದರು ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ವಿಡಿಯೊ ಸಹ ಹರಿದಾಡುತ್ತಿದೆ. ಇನ್ನು ಕಾಂಗ್ರೆಸ್‌ನ ಕೆಲವರು ಇದರಲ್ಲಿ ನಾಸಿರ್‌ ಹುಸೇನ್‌ ಜಿಂದಾಬಾದ್‌ ಹಾಗೂ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಕೂಗುತ್ತಿದ್ದಾರೆಯೋ ಹೊರತು ಪಾಕಿಸ್ತಾನ ಜಿಂದಾಬಾದ್‌ ಎಂದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಸ್ವತಃ ನಾಸಿರ್ ಹುಸೇನ್‌ ಸಹ ಈ ಕುರಿತು ಮಾತನಾಡಿ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಒಂದುವೇಳೆ ಯಾರಾದರೂ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.

ಸದ್ಯ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಮಾತನಾಡಿದ್ದು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ತಿಳಿಸಿದರು. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬುದು ಮೊದಲು ಸಾಬೀತಾಗಬೇಕಿದೆ. ಅದಕ್ಕಾಗಿ ವಿಡಿಯೊ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇನೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

andolana

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

3 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

4 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

4 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

13 hours ago