ಚಿತ್ರದುರ್ಗ(ಹೊಸದುರ್ಗ) ಫೆಬ್ರವರಿ 9: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕಿಡಿಕಾರಿದ್ದಾರೆ.
ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು, ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ನನಗೆ ಆರ್.ಎಸ್.ಎಸ್ ನಲ್ಲಿ ತರಬೇತಿಯಾಗಿದೆ ಎನ್ನುತ್ತಾರೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಮಾತೇ ಎಂದು ಪ್ರಶ್ನಿಸಿದರು. ಇವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…