Mysore
29
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಆರ್.‌ಅಶೋಕ್‌

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಟೀಕೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಸಿಎಂ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು.

ಇದನ್ನು ಓದಿ:ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌ ಆದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ

ಕೋಲಾರ ಶಾಸಕ ಕೊತ್ತೂರು ಮಂಜುನಾಥ್‌ ಅವರು ಅನುದಾನಕ್ಕಾಗಿ ಸಿಎಂ ಕಾಲಿಗೆ ಬೀಳಬೇಕು ಎನ್ನುತ್ತಾರೆ. ಪ್ರತಿಯೊಬ್ಬ ಶಾಸಕರು ಅನುದಾನ ವಿಚಾರವಾಗಿ ಒಂದಲ್ಲಾ ಒಂದು ಮಾತುಗಳನ್ನು ಹೇಳುತ್ತಿದ್ದಾರೆ.

ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಆರ್.‌ಅಶೋಕ್‌ ಬರೆದುಕೊಂಡಿದ್ದಾರೆ.

Tags:
error: Content is protected !!