Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಸಿಎಂ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು.
ಇದನ್ನು ಓದಿ:ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ಅನುದಾನಕ್ಕಾಗಿ ಸಿಎಂ ಕಾಲಿಗೆ ಬೀಳಬೇಕು ಎನ್ನುತ್ತಾರೆ. ಪ್ರತಿಯೊಬ್ಬ ಶಾಸಕರು ಅನುದಾನ ವಿಚಾರವಾಗಿ ಒಂದಲ್ಲಾ ಒಂದು ಮಾತುಗಳನ್ನು ಹೇಳುತ್ತಿದ್ದಾರೆ.
ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಆರ್.ಅಶೋಕ್ ಬರೆದುಕೊಂಡಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…