ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಜಮೀರ್‌ ಅಹ್ಮದ್‌

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ನಡೆ ಬಗ್ಗೆ ಸಚಿವ ಜಮೀರ್‌ ಅಹ್ಮದ್‌ ಬೇಸರ ಹೊರಹಾಕಿದ್ದಾರೆ.

ರಾಜಕೀಯ ಒತ್ತಡದಿಂದಾಗಿ ರಾಜ್ಯಪಾಲರು ಪ್ರಾಷಿಕ್ಯೂಷನ್‌ ಹೊರಡಿಸಿದ್ದಾರೆ. ಇದರಿಂದ ಅವರಿಗಾಗಲೀ ಪಕ್ಷಕ್ಕಾಗಲಿ ಯಾವುದೇ ಹಾನಿಯಾಗುವುದಿಲ್ಲ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಜಮೀರ್‌ ಹೇಳಿದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಆದರೆ ಈಗ ಸಿದ್ದರಾಮಯ್ಯ ಅವರ ಮೇಲೆ ವಿನಾಃ ಕಾರಣ ಆರೋಪ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಿಯೂ ಯಾವುದೇ ಯಶಸ್ಸು ಕಾಣದ ಹಿನ್ನೆಯಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರಿ ಕಾನೂನು ಕ್ರಮಕ್ಕೆ ಜಾರಿ ಮಾಡಿಸಿರುವುದು ರಾಜಕೀಯ ಷಡ್ಯಂತರ ಎಂದು ಕಿಡಿಕಾರಿದರು.

ನಮ್ಮದು ಬಡವರ, ಮಹಿಳೆಯರ ಹಾಗೂ ಜನಪರ ಸರ್ಕಾರವಾಗಿದೆ. ಜನರ ಹಿತಕ್ಕಾಗಿ ಪಂಚ ಗ್ಯಾರೆಂಟಿಗಳನ್ನು ಜಾರಿಗೊಳಿಸಿದ್ದೇವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತದ ಕಾಂಗ್ರೆಸ್‌ ಪರವಾದ ಅಲೆಯಿದೆ ಇದನ್ನು ಸಹಿಸದೇ ಸರ್ಕಾರ ಅಸ್ಥಿರಗೊಳಿಸಲು ಸಂಚು ರೂಪಿಸಲಾಗುತ್ತಿದೆ. ಬಿಜೆಪಿಯ ಯಾವುದೇ ಹುನ್ನಾರುಗಳಿಗೆ ನಾವು ಧಕ್ಕುವುದಿಲ್ಲ, ಈ ಎಲ್ಲಾ ವಿವಾದಗಳಿಗೂ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago