ಬೆಂಗಳೂರು: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಎಚ್ಚರಿಕೆ ನೀಡಿದರು.
ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು.
ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಇತರೆ ಹೈಲೈಟ್ಸ್!
ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು
IGST ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು
ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ
ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚನೆ
ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. Action plan ಸಿದ್ದಪಡಿಸಬೇಕು. ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು
ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…