cm siddaramaiah
ಬೆಂಗಳೂರು : ಸಿಗಂಧೂರು ಚೌಡೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯದ ಉದ್ದನೆಯ ತೂಗು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ನಡವಳಿಕೆಗಳು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಬಗ್ಗೆ ತಮ್ಮೊಂದಿಗೆ ಯಾರೂ ಚರ್ಚೆ ಮಾಡಿಲ್ಲ. ನನಗೆ ಹೇಳದೇ ಎಲ್ಲವನ್ನೂ ನಿಗದಿ ಮಾಡಿದ್ದಾರೆ. ಕಾರ್ಯಕ್ರಮದ ಮಾಹಿತಿ ಪಡೆದು ನಾನೇ ಖುದ್ದಾಗಿ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿದ್ದೆ. ಕಾರ್ಯಕ್ರಮವನ್ನು ಮುಂದೂಡುವುದಾಗಿ ಹೇಳಿದ್ದರು. ಆದರೆ ಸ್ಥಳೀಯ ಬಿಜೆಪಿ ನಾಯಕರ ಒತ್ತಡದ ಮೇರೆಗೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ತಮಗೆ ಆಹ್ವಾನ ನೀಡದೇ ಇರುವ ಕಾರಣಕ್ಕೆ ಪ್ರತಿಭಾಟನಾತ್ಮಕವಾಗಿ ಕಾರ್ಯಕ್ರಮದಲ್ಲಿ ತಾವೂ ಸೇರಿದಂತೆ ಯಾರೂ ಭಾಗವಹಿಸುತ್ತಿಲ್ಲ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಯಾರೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಬಹಿಷ್ಕರಿಸುವುದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸಂಘರ್ಷ ಏರ್ಪಡುವುದಿಲ್ಲವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದನ್ನು ಶುರು ಮಾಡಿದ್ದು ನಾವಲ್ಲ, ಅವರು. ಕರೆಯದೇ ಕಾರ್ಯಕ್ರಮ ಮಾಡಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಬಹಳಷ್ಟು ಯೋಜನೆಗಳಲ್ಲಿ ರಾಜ್ಯಸರ್ಕಾರದ ಪಾಲು ಶೇ.75 ರಷ್ಟಿದೆ. ಆದರೂ ನಾವು ಕೇಂದ್ರ ಸರ್ಕಾರದವರನ್ನು ಆಹ್ವಾನಿಸುತ್ತೇವೆ. ರೈಲ್ವೆ ಇಲಾಖೆಯಲ್ಲಿ ಶೇ.50 ರಷ್ಟು ಯೋಜನಾ ವೆಚ್ಚ ಹಾಗೂ ಭೂಮಿಯನ್ನು ನೀಡುತ್ತೇವೆ. ಅದನ್ನು ರಾಜ್ಯಸರ್ಕಾರದ ಯೋಜನೆಗಳೆಂದು ಬಿಂಬಿಸಿಕೊಳ್ಳುವುದಿಲ್ಲ ಎಂದರು.
ಸಚಿವರ ಆಕ್ಷೇಪ : ಶರಾವತಿ ಹಿನ್ನೀರಿನಲ್ಲಿ 473 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ದೇಶದಲ್ಲೇ ಎರಡನೇ ಅತೀ ಉದ್ದದ ತೂಗು ಕೇಬಲ್ ಸೇತುವೆ 2.4 ಕಿ.ಮೀ. ಉದ್ದವಿದ್ದು, ಮಲೆನಾಡು ಭಾಗದ ಜನರ 60 ವರ್ಷಗಳ ಕನಸು ನನಸಾಗಿದೆ.
ಬಹುನಿರೀಕ್ಷಿತ ಶರಾವತಿ ತೂಗು ಸೇತುವೆ ಉದ್ಘಾಟನೆಗೆ ತಮನ್ನೂ ಆಹ್ವಾನಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ತಮಗೂ ಆಹ್ವಾನ ಇಲ್ಲ ಎಂದು ಹೇಳಿದ್ದಾರೆ. ಸಚಿವರಾದಿಯಾಗಿ ಶಾಸಕರೂ ಕೂಡ ಕಾರ್ಯಕ್ರಮದಿಂದ ದೂರ ಉಳಿದಿರುವುದು ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…