ರಾಜ್ಯ

ಮತಗಳ ಓಲೈಕೆಗಾಗಿ ಸಿದ್ದರಾಮಯ್ಯ ಅನ್ಯಧರ್ಮಿಯರ ಪೇಟ ಹಾಕಿಕೊಳ್ಳುತ್ತಾರೆ: ಯತ್ನಾಳ್‌ ಲೇವಡಿ

ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಯಾವುದೇ ಶುಭ ಸಮಾರಂಭ ನಡೆಯುವ ಮುನ್ನ ಹಾಲು ಮತದವರನ್ನು ಕರೆಸಿ, ಅವರಿಂದ ಕಂಬಳಿ ಹಾಸಿ, ನೀರಿನ ತಂಬಿಗೆ ಇರಿಸುವ ಮೂಲಕ ಶುಭಾರಂಭ ಮಾಡಲಾಗುತ್ತದೆ. ಅಂತಹ ಪವಿತ್ರ ಸಮುದಾಯದ ಪೇಟವನ್ನು ಅದೇ ಜಾತಿಯಲ್ಲಿ ಹುಟ್ಟಿದ ಸಿದ್ದರಾಮಯ್ಯ ತಿರಸ್ಕರಿಸುತ್ತಾರೆ. ಆದರೆ ಮತಗಳ ಓಲೈಕೆಗಾಗಿ ಅನ್ಯಧರ್ಮಿಯರ ಪೇಟ ಹಾಕಿಕೊಳ್ಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಣೇಶೋತ್ಸವ ಆಚರಣೆಗೆ ನಾನಾ ರೀತಿಯ ಷರತ್ತುಗಳನ್ನು ಹಾಕಲಾಗುತ್ತಿದೆ, ಇದನ್ನು ಒಪ್ಪಲು ಸಾಧ್ಯವಿಲ್ಲ. 2028ಕ್ಕೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆ ವೇಳೆ ಗಣೇಶೋತ್ಸವದ ಮೇಲೆ ಕಲ್ಲು ತೂರುವ ಯಾರಿಗೂ ಉಳಿಗಾಲ ಇರುವುದಿಲ್ಲ. ಗಣೇಶೋತ್ಸವದ ಹಿಂದೆ ಜೆಸಿಬಿ ಸಾಗುತ್ತಿರುತ್ತದೆ. ಕಲ್ಲು ಹೊಡೆದವರ ಮನೆಗೆ ತಕ್ಷಣವೇ ಜೆಸಿಬಿ ನುಗ್ಗಿಸಿ ಧ್ವಂಸಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ ದೇಶದ ಜನ ಅಟಲ್‍ಬಿಹಾರಿ ವಾಜ್‍ಪೇಯಿ, ನರೆಂದ್ರ ಮೋದಿ ಅವರು ಪ್ರಧಾನಿಗಳಾಬೇಕೆಂದು ಬಯಸಿದ್ದರು. ಅದರಂತೆ ಅವರು ಪ್ರಧಾನಿಗಳಾದರು. ಬಸನಗೌಡ ಪಾಟೀಲ್ ಮುಖ್ಯಮಂತ್ರಿಯಾಗಬೇಕೆಂದು ರಾಜ್ಯದ ಜನ ಮನೆ ಮನೆಗಳಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ರಾಜ್ಯದ ಹಿಂದೂಗಳ ಮತಗಳಿಂದ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

3 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

3 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

4 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

4 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

4 hours ago