ರಾಜ್ಯ

ಮತಗಳ ಓಲೈಕೆಗಾಗಿ ಸಿದ್ದರಾಮಯ್ಯ ಅನ್ಯಧರ್ಮಿಯರ ಪೇಟ ಹಾಕಿಕೊಳ್ಳುತ್ತಾರೆ: ಯತ್ನಾಳ್‌ ಲೇವಡಿ

ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಯಾವುದೇ ಶುಭ ಸಮಾರಂಭ ನಡೆಯುವ ಮುನ್ನ ಹಾಲು ಮತದವರನ್ನು ಕರೆಸಿ, ಅವರಿಂದ ಕಂಬಳಿ ಹಾಸಿ, ನೀರಿನ ತಂಬಿಗೆ ಇರಿಸುವ ಮೂಲಕ ಶುಭಾರಂಭ ಮಾಡಲಾಗುತ್ತದೆ. ಅಂತಹ ಪವಿತ್ರ ಸಮುದಾಯದ ಪೇಟವನ್ನು ಅದೇ ಜಾತಿಯಲ್ಲಿ ಹುಟ್ಟಿದ ಸಿದ್ದರಾಮಯ್ಯ ತಿರಸ್ಕರಿಸುತ್ತಾರೆ. ಆದರೆ ಮತಗಳ ಓಲೈಕೆಗಾಗಿ ಅನ್ಯಧರ್ಮಿಯರ ಪೇಟ ಹಾಕಿಕೊಳ್ಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಣೇಶೋತ್ಸವ ಆಚರಣೆಗೆ ನಾನಾ ರೀತಿಯ ಷರತ್ತುಗಳನ್ನು ಹಾಕಲಾಗುತ್ತಿದೆ, ಇದನ್ನು ಒಪ್ಪಲು ಸಾಧ್ಯವಿಲ್ಲ. 2028ಕ್ಕೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆ ವೇಳೆ ಗಣೇಶೋತ್ಸವದ ಮೇಲೆ ಕಲ್ಲು ತೂರುವ ಯಾರಿಗೂ ಉಳಿಗಾಲ ಇರುವುದಿಲ್ಲ. ಗಣೇಶೋತ್ಸವದ ಹಿಂದೆ ಜೆಸಿಬಿ ಸಾಗುತ್ತಿರುತ್ತದೆ. ಕಲ್ಲು ಹೊಡೆದವರ ಮನೆಗೆ ತಕ್ಷಣವೇ ಜೆಸಿಬಿ ನುಗ್ಗಿಸಿ ಧ್ವಂಸಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ ದೇಶದ ಜನ ಅಟಲ್‍ಬಿಹಾರಿ ವಾಜ್‍ಪೇಯಿ, ನರೆಂದ್ರ ಮೋದಿ ಅವರು ಪ್ರಧಾನಿಗಳಾಬೇಕೆಂದು ಬಯಸಿದ್ದರು. ಅದರಂತೆ ಅವರು ಪ್ರಧಾನಿಗಳಾದರು. ಬಸನಗೌಡ ಪಾಟೀಲ್ ಮುಖ್ಯಮಂತ್ರಿಯಾಗಬೇಕೆಂದು ರಾಜ್ಯದ ಜನ ಮನೆ ಮನೆಗಳಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ರಾಜ್ಯದ ಹಿಂದೂಗಳ ಮತಗಳಿಂದ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago