ರಾಜ್ಯ

ಸಿದ್ದರಾಮಯ್ಯಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು: ಸಚಿವ ಶಿವರಾಜ ತಂಗಡಗಿ

ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಕಾಲದಲ್ಲಿ ಐದು ವರ್ಷಗಳ ಹಿಂದೆ ಕರ್ನಾಟಕ ನಾಮಕರಣಗೊಂಡಿತ್ತು. ಇದೀಗ ಆಧುನಿಕ ದೇವರಾಜ ಅರಸು ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಸಮಯದಲ್ಲಿಯೇ ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಭ್ರಮ-50ನ್ನು ಆಚರಿಸಲಾಗುತ್ತಿದ್ದು, ರಾಜ್ಯದ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾದವರು ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರ ಸಹಿ ಕನ್ನಡದಲ್ಲಿ ಇವೆ. ಕಡತಗಳು ಕೂಡ ಕನ್ನಡದಲ್ಲಿ ಇರಬೇಕು ಎಂದು ಆದೇಶವನ್ನು ಹೇಳಿದರು. ನವೆಂಬರ್.‌1ರೊಳಗಾಗಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಮಾಡಲು ಹೇಳಿದ್ದಾರೆ. ಅಲ್ಲದೇ ವಿಧಾನಸೌಧದಲ್ಲಿ ನಮಗೆ ಸಂಧಿ ಮತ್ತು ವ್ಯಾಕರಣದ ಮಾಹಿತಿ ಬಗ್ಗೆ ತಿಳಿಸುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಕನ್ನಡದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಹೀಗಾಗಿ ಅವರನ್ನು ಕನ್ನಡರಾಮಯ್ಯ ಎಂದು ಕರೆಯಬೇಕು. ಹೆಸರಾಯ್ತು ಕರ್ನಾಟಕ, ಉಸಿರಾಯ್ತು ಕನ್ನಡ ಎಂಬ ಕಾರ್ಯಕ್ರಮದಡಿಯಲ್ಲಿ ಈ ವರ್ಷ ನವೆಂಬರ್.1ರೊಳಗಾಗಿ ನಾಲ್ಕು ಕಾರ್ಯಕ್ರಮ ಮಾಡಲು ಚಿಂತನೆ ಮಾಡಿದ್ದೇವೆ. ಪ್ರಥಮ ಕಾರ್ಯಕ್ರಮ ಮೈಸೂರಿನಿಂದ ಮಾಡಲಾಗಿದೆ. ಹೀಗಾಗಿ ಮೈಸೂರಿನಲ್ಲಿ 15 ಗೋಷ್ಠಿಗಳನ್ನು ಮಾಡಲಾಗಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಯಶಸ್ವಿ ಕನ್ನಡ ಕಾರ್ಯಕ್ರಮ ಮಾಡಲಾಗಿದೆ. ಆದರೆ ಇದೀಗ ಕಲ್ಯಾಣ ರಾಜ್ಯದ ಗಡಿ ಭಾಗವಾದ ರಾಯಚೂರಿನಲ್ಲಿ ಇದು ಮೂರನೇ ಕಾರ್ಯಕ್ರಮವಾಗಿದೆ. ಗೋಕಾಕ್‌ ಚಳುವಳಿ ಹಿನ್ನೋಟ-ಮುನ್ನೋಟ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago