ರಾಜ್ಯ

ಸಿದ್ದರಾಮಯ್ಯಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು: ಸಚಿವ ಶಿವರಾಜ ತಂಗಡಗಿ

ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಕಾಲದಲ್ಲಿ ಐದು ವರ್ಷಗಳ ಹಿಂದೆ ಕರ್ನಾಟಕ ನಾಮಕರಣಗೊಂಡಿತ್ತು. ಇದೀಗ ಆಧುನಿಕ ದೇವರಾಜ ಅರಸು ಎನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಸಮಯದಲ್ಲಿಯೇ ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಭ್ರಮ-50ನ್ನು ಆಚರಿಸಲಾಗುತ್ತಿದ್ದು, ರಾಜ್ಯದ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾದವರು ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರ ಸಹಿ ಕನ್ನಡದಲ್ಲಿ ಇವೆ. ಕಡತಗಳು ಕೂಡ ಕನ್ನಡದಲ್ಲಿ ಇರಬೇಕು ಎಂದು ಆದೇಶವನ್ನು ಹೇಳಿದರು. ನವೆಂಬರ್.‌1ರೊಳಗಾಗಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಮಾಡಲು ಹೇಳಿದ್ದಾರೆ. ಅಲ್ಲದೇ ವಿಧಾನಸೌಧದಲ್ಲಿ ನಮಗೆ ಸಂಧಿ ಮತ್ತು ವ್ಯಾಕರಣದ ಮಾಹಿತಿ ಬಗ್ಗೆ ತಿಳಿಸುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಕನ್ನಡದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಹೀಗಾಗಿ ಅವರನ್ನು ಕನ್ನಡರಾಮಯ್ಯ ಎಂದು ಕರೆಯಬೇಕು. ಹೆಸರಾಯ್ತು ಕರ್ನಾಟಕ, ಉಸಿರಾಯ್ತು ಕನ್ನಡ ಎಂಬ ಕಾರ್ಯಕ್ರಮದಡಿಯಲ್ಲಿ ಈ ವರ್ಷ ನವೆಂಬರ್.1ರೊಳಗಾಗಿ ನಾಲ್ಕು ಕಾರ್ಯಕ್ರಮ ಮಾಡಲು ಚಿಂತನೆ ಮಾಡಿದ್ದೇವೆ. ಪ್ರಥಮ ಕಾರ್ಯಕ್ರಮ ಮೈಸೂರಿನಿಂದ ಮಾಡಲಾಗಿದೆ. ಹೀಗಾಗಿ ಮೈಸೂರಿನಲ್ಲಿ 15 ಗೋಷ್ಠಿಗಳನ್ನು ಮಾಡಲಾಗಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಯಶಸ್ವಿ ಕನ್ನಡ ಕಾರ್ಯಕ್ರಮ ಮಾಡಲಾಗಿದೆ. ಆದರೆ ಇದೀಗ ಕಲ್ಯಾಣ ರಾಜ್ಯದ ಗಡಿ ಭಾಗವಾದ ರಾಯಚೂರಿನಲ್ಲಿ ಇದು ಮೂರನೇ ಕಾರ್ಯಕ್ರಮವಾಗಿದೆ. ಗೋಕಾಕ್‌ ಚಳುವಳಿ ಹಿನ್ನೋಟ-ಮುನ್ನೋಟ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago