ರಾಜ್ಯ

ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಆರ್‌.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ. ಈ ಚುನಾವಣೆಯಲ್ಲಿ ಎಲ್ಲ ಮಹಿಳೆಯರಿಗೆ ಗ್ಯಾರಂಟಿ ನೀಡಿ, ಅವರ ಗಂಡಂದಿರಿಗೆ ಟ್ಯಾಕ್ಸ್‌ ಹಾಕಿದ್ದಾರೆ. ಕಾಂಗ್ರೆಸ್‌ಗೆ ಮಾನ ಮರ್ಯಾದೆ ಹೋಗಿದೆ. ಮುಸ್ಲಿಂ ತುಷ್ಟೀಕರಣ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸಿದ್ದರಿಂದ ಕಾಂಗ್ರೆಸ್‌ಗೆ ಹೀಗಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಸೇರಿ ಎನ್‌ಡಿಎಗೆ 51.66% ಮತ ಬಂದಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ಗೆ 45.43% ಬಂದಿದೆ. ಅಂದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಎರಡಂಕಿ ದಾಟುತ್ತೇವೆ ಎಂದು ಅವರು ಹೇಳುತ್ತಲೇ ಇದ್ದರು. ಆದರೆ ಅವರು ವಿಫಲರಾಗಿದ್ದಾರೆ ಎಂದರು.

ಕಾಂಗ್ರೆಸ್‌ ಈ ಬಾರಿ ದೇಶದಲ್ಲಿ 21.56% ಮತ ಪಡೆದಿದೆ. ಬಿಜೆಪಿಗೆ ಕಳೆದ ಬಾರಿ 35% ಇದ್ದು, ಈ ಬಾರಿ 36.8% ಮತ ಗಳಿಕೆಯಾಗಿದೆ. ಕಾಂಗ್ರೆಸ್‌ ಮೂರಂಕಿಗೆ ಹೋಗಲೇ ಇಲ್ಲ. 18-20 ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ, ಡಿಸಿಎಂ ಹೇಳಿದ್ದು, ಆ ಹೇಳಿಕೆ ತಲೆ ಕೆಳಗಾಗಿದೆ. ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ 1.39 ಲಕ್ಷ ಅಂತರ ಬಂದಿದ್ದು, ಮುಖ್ಯಮಂತ್ರಿ ಫೇಲ್‌ ಆಗಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರ ಸಹೋದರ ಹೀನಾಯವಾಗಿ ಸೋತಿದ್ದಾರೆ. ರಾಜಕೀಯಕ್ಕೆ ಮೊದಲ ಬಾರಿಗೆ ಬಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ 2.69 ಲಕ್ಷ ಅಂತರ ಕೊಟ್ಟಿದ್ದಾರೆ. ಡಿ.ಕೆ.ಸುರೇಶ್‌ ಏಳು ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ ಎಂದರು.

ಎನ್‌ಡಿಎನಲ್ಲಿ ಯಾವುದೇ ಒಡಕಿಲ್ಲ. ಇಂಡಿಯಾ ಒಕ್ಕೂಟದಿಂದ ಕೆಲವರು ಎನ್‌ಡಿಎಗೆ ಬರುವ ಸಾಧ್ಯತೆಯಿದೆ. ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ. ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರೇ ತಮ್ಮ ಸೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದರು.

2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 206 ಸ್ಥಾನಗಳನ್ನು ಗಳಿಸಿತ್ತು. ಅದು ಕೂಡ ಸರಳ ಬಹುಮತ ಅಲ್ಲ. ಅಷ್ಟೇ ಅಲ್ಲ ಈಗ ಬಿಜೆಪಿ ಗಳಿಸಿದ್ದಷ್ಟೂ ಅಲ್ಲ. 2014 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 44 ಸ್ಥಾನ ಗಳಿಸಿತ್ತು. ಕೇವಲ ಐದು ವರ್ಷದ ದುರಾಡಳಿತದಿಂದಾಗಿ 160 ಸ್ಥಾನಗಳನ್ನು ಕಳೆದುಕೊಂಡಿತ್ತು. 2019 ರಲ್ಲಿ ಬಿಜೆಪಿ 303 ಸ್ಥಾನ ಪಡೆದಿದ್ದು, 2024 ರಲ್ಲಿ 239 ಸ್ಥಾನ ಪಡೆದು, 64 ಸ್ಥಾನ ಮಾತ್ರ ಮೈನಸ್ ಆಗಿದೆ. 2019 ರಲ್ಲಿ ಕಾಂಗ್ರೆಸ್ 52 ಸ್ಥಾನ ಪಡೆದಿದ್ದು, 2024 ರಲ್ಲಿ 99 ಸ್ಥಾನ ಪಡೆದು, 47 ಸ್ಥಾನ ಹೆಚ್ಚಿಸಿಕೊಂಡಿದೆ. ಈಗ ಇಂಡಿಯಾ ಕೂಟದಿಂದಾಗಿ ಕಾಂಗ್ರೆಸ್‌ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಕಾಂಗ್ರೆಸ್‌ಗೆ ಸಿಕ್ಕಿರುವುದು 99 ಸ್ಥಾನ ಮಾತ್ರ. ಇಂಡಿಯಾ ಒಕ್ಕೂಟಕ್ಕೆ ಸಿಕ್ಕಿರುವುದು 232 ಸ್ಥಾನಗಳು. ಬಿಜೆಪಿಗೆ 239 ಸ್ಥಾನಗಳಿವೆ. ಅಂದರೆ ಒಟ್ಟು ಇಂಡಿಯಾ ಕೂಟ ಪಡೆದ ಸ್ಥಾನಗಳು ಬಿಜೆಪಿಗಿಂತಲೂ ಕಡಿಮೆ ಇದೆ ಎಂದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 80 ಸೀಟು ಪಡೆದಿತ್ತು. ಬಿಜೆಪಿ 104 ಪಡೆದು ದೊಡ್ಡ ಪಕ್ಷವಾಗಿತ್ತು. ಆದರೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿದಾಗ ಸಿದ್ದರಾಮಯ್ಯ ಕೈ ಕಟ್ಟಿಕೊಂಡು ಕೂತಿದ್ದರು. ಆಗ ನೈತಿಕತೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸಚಿವರ ಮಕ್ಕಳು ಸೋತಿರುವುದು ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಜನರು ತೋರಿರುವ ವಿರೋಧ ಎಂದು ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

18 mins ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

2 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

3 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

4 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

5 hours ago