ರಾಜ್ಯ

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿಂದೆ 94-95ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ:- ಸಿದ್ದರಾಮಯ್ಯರ ರಾಜಕೀಯ ಪ್ರಯಾಣ ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ: ನಿಖಿಲ್‌ ಕುಮಾರಸ್ವಾಮಿ

ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ ಇದ್ದು ಸಾಧ್ಯವಾದಷ್ಟು ಮಟ್ಟಿಗೆ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.

ಇನ್ನು ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ.

ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಶುಭಹಾರೈಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago