cm siddaramaiah Administrative Officer
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.
ಹಿಂದೆ 94-95ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ:- ಸಿದ್ದರಾಮಯ್ಯರ ರಾಜಕೀಯ ಪ್ರಯಾಣ ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ: ನಿಖಿಲ್ ಕುಮಾರಸ್ವಾಮಿ
ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ ಇದ್ದು ಸಾಧ್ಯವಾದಷ್ಟು ಮಟ್ಟಿಗೆ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.
ಇನ್ನು ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ.
ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಶುಭಹಾರೈಸಿದರು.
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…