siddaramaiah terrorism
ಬಾಗಲಕೋಟೆ : ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೂಡಲಸಂಗಮ ಸಭಾಭವನ ಹತ್ತಿರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಹಿಂದೆ ಇಂದಿರಾ ಗಾಂಧಿಯವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು ಎಂದರು.
ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಮುಖ್ಯ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಗಬೇಕೆಂದು ಹೇಳಿದ್ದು, ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಾರೋ ಅಥವಾ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡುತ್ತಾರೋ ತಿಳಿದಿಲ್ಲ. ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ಮಾಡುವುದಾಗಿ ಹೇಳಿದೆ. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಯಾಗಬೇಕಿರುವುದು ಬಹಳ ಮುಖ್ಯ ಎಂದರು.
ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಸಚಿವರು ಲಿಖಿತವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು, ಅದು ಸಲ್ಲಿಕೆಯಾದ ನಂತರ ಪುನಃ ಸಚಿವ ಸಂಪುಟ ಕರೆದು ಚರ್ಚೆ ಮಾಡುತ್ತೇವೆ ಎಂದರು.
ಮಾನಹಾನಿ ಮಾಡಬಾರದು ಮೋದಿಯವರ ತಲೆ ಇಲ್ಲದ ಚಿತ್ರ ಹಾಕಿ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ಅದನ್ನು ತೆಗೆದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮದಲ್ಲಿ ನರೇಂದ್ರ ಮೋದಿಯವರದ್ದಾಗಲಿ ಬೇರೆ ಯಾರದ್ದೇ ಆಗಲಿ ಮಾಡಬಾರದು. ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇನ್ನೊಬ್ಬರ ಮಾನಹಾನಿ ಮಾಡಬಾರದು ಎಂದರು.
ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಉಗ್ರರ ದಾಳಿಯ ನಂತರ ಕೇಂದ್ರ ಸರ್ಕಾರದ ರಾಜತಾಂತ್ರಿಕ ನಡೆಯಿಂದಾಗಿ ತಾಯಿ ಮಕ್ಕಳು ಅಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಎಂದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…