ಬೆಂಗಳೂರು : ಕನ್ನಡದಲ್ಲಿ ಒಟಿಟಿ ವೇದಿಕೆ ತರಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ ಜೊತೆಗೆ ರಾಜಕುಮಾರ್ ಕನಸಿನಂತೆ ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರವಾದ ಗೌರವವಿದೆ. ದೆಹಲಿಗೆ ಹೋಗಿದ್ದ ಕಾರಣ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಆದರೆ ಮಿಸ ಮಾಡ್ದೆ ಬರಬೇಕು ಅಂತ ಬಂದಿದ್ದೇನೆ.ಕನ್ನಡ ಚಿತ್ರರಂಗ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಸಿಗುತ್ತದೆ. ರಾಜಕುಮಾರ್ ಅವರ ಕನಸಿನಂತೆ ಖಂಡಿತಾ ಒಂದು ಫಿಲ್ಮಿ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಯಾವಾಗಲೂ ಬೆಂಬಲ ಸೂಚಿಸುತ್ತದೆ. ಫಿಲ್ಮಿ ಸಿಟಿಗೆ ಜಾಗ ಕೊಟ್ಟಿದ್ದೆ ನಮ್ಮ ಸರ್ಕಾರ. ನೂರು ಎಕರೆಗೂ ಹೆಚ್ಚು ಜಮೀನು ಕೊಟ್ಟಿದ್ದೇವೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…