ರಾಜ್ಯ

ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಲೀಲಾವತಿಯವರು ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು. ಬಹಳಾ ಮನೋಜ್ಞವಾಗಿ ನಟನೆ ಮಾಡುತ್ತಿದ್ದರು. ನಾನು ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನಮ್ಮ ಕಾಲದಲ್ಲಿ ವರನಟ ಡಾ. ರಾಜ್‌ಕುಮಾರ್‌ ಹಾಗೂ ಲೀಲಾವತಿಯವರ ಜೋಡಿ ಬಹಳಾ ಜನಪ್ರಿಯವಾಗಿತ್ತು. ನಾನು 60-70 ರ ದಶಕದಲ್ಲಿ ನಾನು ವಿಧ್ಯಾರ್ಥಿಯಾಗಿದ್ದಾಗ ಲೀಲಾವತಿಯವರ ಸಿನಿಮಾಗಳನ್ನು ನೋಡಿದ್ದೇನೆ.

ಆಕೆ ಒಬ್ಬ ಪರಿಪೂರ್ಣ ಕಲಾವಿದೆ. ಸಾಮಾಜಿಕ ಪಾತ್ರವಿರಲಿ, ಐತಿಹಾಸಿಕ ಪಾತ್ರವಿರಲಿ ಯಾವುದೇ ಪಾತ್ರ ಕೊಟ್ಟರು ಸಹ ಲೀಲಾಜಾಲವಾಗಿ ನಟನೆ ಮಾಡುತ್ತಿದ್ದರು. ಭಕ್ತ ಕುಂಬಾರ ಸಿನಿಮಾದಲ್ಲಿನ ಅವರ ಅಭಿನಯವನ್ನು ಮೆಚ್ಚಲೇ ಬೇಕು. ಅವರ ಸಾವು ನನಗೆ ದುಖಃ ತಂದಿದೆ ಅವರ ನಿಧನದ ಬಗ್ಗೆ ನನ್ನ ಸಂತಾಪಗಳು ಎಂದಿದ್ದಾರೆ.

ಕಳೆದ ವಾರ ಲೀಲಾವತಿಯವರ ಫಾರ್ಮ್‌ಹೌಸ್‌ ಗೆ ಹೋಗಿ ಆರೋಗ್ಯ ವಿಚಾರಿಸಿದ್ದೆ. ಆಗ ವಿನೋದ್‌ ರಾಜ್‌ ಕೂಡ ಇದ್ದರು. ತಾಯಿ ನಿನ್ನ ಮೇಲೆ ಬಹಳ ಪ್ರೀತಿ ಹೊಂದಿದ್ದರು. ನೀವಿಬ್ಬರೂ ಆದರ್ಶ ತಾಯಿ ಮಗ ಕೊನೆ ಘಳಿಗೆಯಲ್ಲಿ ಚೆನ್ನಾಗಿ ನೋಡಿಕೊಳ್ಳಪ್ಪ ಎಂದು ಹೇಳಿದ್ದೆ. ಏನೇ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೆ. ಆದರೆ ಅವರು ನನ್ನಿಂದ ಏನೂ ಸಹಾಯ ಕೇಳಲಿಲ್ಲ ಎಂದು ಹೇಳಿದರು.

lokesh

Recent Posts

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

10 mins ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

38 mins ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

58 mins ago

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

1 hour ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

2 hours ago

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

6 hours ago