ರಾಜ್ಯ

ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಲೀಲಾವತಿಯವರು ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು. ಬಹಳಾ ಮನೋಜ್ಞವಾಗಿ ನಟನೆ ಮಾಡುತ್ತಿದ್ದರು. ನಾನು ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನಮ್ಮ ಕಾಲದಲ್ಲಿ ವರನಟ ಡಾ. ರಾಜ್‌ಕುಮಾರ್‌ ಹಾಗೂ ಲೀಲಾವತಿಯವರ ಜೋಡಿ ಬಹಳಾ ಜನಪ್ರಿಯವಾಗಿತ್ತು. ನಾನು 60-70 ರ ದಶಕದಲ್ಲಿ ನಾನು ವಿಧ್ಯಾರ್ಥಿಯಾಗಿದ್ದಾಗ ಲೀಲಾವತಿಯವರ ಸಿನಿಮಾಗಳನ್ನು ನೋಡಿದ್ದೇನೆ.

ಆಕೆ ಒಬ್ಬ ಪರಿಪೂರ್ಣ ಕಲಾವಿದೆ. ಸಾಮಾಜಿಕ ಪಾತ್ರವಿರಲಿ, ಐತಿಹಾಸಿಕ ಪಾತ್ರವಿರಲಿ ಯಾವುದೇ ಪಾತ್ರ ಕೊಟ್ಟರು ಸಹ ಲೀಲಾಜಾಲವಾಗಿ ನಟನೆ ಮಾಡುತ್ತಿದ್ದರು. ಭಕ್ತ ಕುಂಬಾರ ಸಿನಿಮಾದಲ್ಲಿನ ಅವರ ಅಭಿನಯವನ್ನು ಮೆಚ್ಚಲೇ ಬೇಕು. ಅವರ ಸಾವು ನನಗೆ ದುಖಃ ತಂದಿದೆ ಅವರ ನಿಧನದ ಬಗ್ಗೆ ನನ್ನ ಸಂತಾಪಗಳು ಎಂದಿದ್ದಾರೆ.

ಕಳೆದ ವಾರ ಲೀಲಾವತಿಯವರ ಫಾರ್ಮ್‌ಹೌಸ್‌ ಗೆ ಹೋಗಿ ಆರೋಗ್ಯ ವಿಚಾರಿಸಿದ್ದೆ. ಆಗ ವಿನೋದ್‌ ರಾಜ್‌ ಕೂಡ ಇದ್ದರು. ತಾಯಿ ನಿನ್ನ ಮೇಲೆ ಬಹಳ ಪ್ರೀತಿ ಹೊಂದಿದ್ದರು. ನೀವಿಬ್ಬರೂ ಆದರ್ಶ ತಾಯಿ ಮಗ ಕೊನೆ ಘಳಿಗೆಯಲ್ಲಿ ಚೆನ್ನಾಗಿ ನೋಡಿಕೊಳ್ಳಪ್ಪ ಎಂದು ಹೇಳಿದ್ದೆ. ಏನೇ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೆ. ಆದರೆ ಅವರು ನನ್ನಿಂದ ಏನೂ ಸಹಾಯ ಕೇಳಲಿಲ್ಲ ಎಂದು ಹೇಳಿದರು.

lokesh

Recent Posts

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…

33 mins ago

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

16 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

16 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

16 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

16 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

16 hours ago