ರಾಜ್ಯ

ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಲೀಲಾವತಿಯವರು ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು. ಬಹಳಾ ಮನೋಜ್ಞವಾಗಿ ನಟನೆ ಮಾಡುತ್ತಿದ್ದರು. ನಾನು ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನಮ್ಮ ಕಾಲದಲ್ಲಿ ವರನಟ ಡಾ. ರಾಜ್‌ಕುಮಾರ್‌ ಹಾಗೂ ಲೀಲಾವತಿಯವರ ಜೋಡಿ ಬಹಳಾ ಜನಪ್ರಿಯವಾಗಿತ್ತು. ನಾನು 60-70 ರ ದಶಕದಲ್ಲಿ ನಾನು ವಿಧ್ಯಾರ್ಥಿಯಾಗಿದ್ದಾಗ ಲೀಲಾವತಿಯವರ ಸಿನಿಮಾಗಳನ್ನು ನೋಡಿದ್ದೇನೆ.

ಆಕೆ ಒಬ್ಬ ಪರಿಪೂರ್ಣ ಕಲಾವಿದೆ. ಸಾಮಾಜಿಕ ಪಾತ್ರವಿರಲಿ, ಐತಿಹಾಸಿಕ ಪಾತ್ರವಿರಲಿ ಯಾವುದೇ ಪಾತ್ರ ಕೊಟ್ಟರು ಸಹ ಲೀಲಾಜಾಲವಾಗಿ ನಟನೆ ಮಾಡುತ್ತಿದ್ದರು. ಭಕ್ತ ಕುಂಬಾರ ಸಿನಿಮಾದಲ್ಲಿನ ಅವರ ಅಭಿನಯವನ್ನು ಮೆಚ್ಚಲೇ ಬೇಕು. ಅವರ ಸಾವು ನನಗೆ ದುಖಃ ತಂದಿದೆ ಅವರ ನಿಧನದ ಬಗ್ಗೆ ನನ್ನ ಸಂತಾಪಗಳು ಎಂದಿದ್ದಾರೆ.

ಕಳೆದ ವಾರ ಲೀಲಾವತಿಯವರ ಫಾರ್ಮ್‌ಹೌಸ್‌ ಗೆ ಹೋಗಿ ಆರೋಗ್ಯ ವಿಚಾರಿಸಿದ್ದೆ. ಆಗ ವಿನೋದ್‌ ರಾಜ್‌ ಕೂಡ ಇದ್ದರು. ತಾಯಿ ನಿನ್ನ ಮೇಲೆ ಬಹಳ ಪ್ರೀತಿ ಹೊಂದಿದ್ದರು. ನೀವಿಬ್ಬರೂ ಆದರ್ಶ ತಾಯಿ ಮಗ ಕೊನೆ ಘಳಿಗೆಯಲ್ಲಿ ಚೆನ್ನಾಗಿ ನೋಡಿಕೊಳ್ಳಪ್ಪ ಎಂದು ಹೇಳಿದ್ದೆ. ಏನೇ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೆ. ಆದರೆ ಅವರು ನನ್ನಿಂದ ಏನೂ ಸಹಾಯ ಕೇಳಲಿಲ್ಲ ಎಂದು ಹೇಳಿದರು.

lokesh

Recent Posts

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

5 mins ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

15 mins ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

18 mins ago

ಓದುಗರ ಪತ್ರ | ಕಸ ವಿಂಗಡಣೆ ಕ್ರಮ ಸ್ವಾಗತಾರ್ಹ

ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ…

22 mins ago

ಓದುಗರ ಪತ್ರ | ದ್ವೇಷ ಭಾಷಣ ಮಸೂದೆ: ಸ್ವಾಗತಾರ್ಹ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ…

24 mins ago

ಮೈ ಕೊರೆಯುವ ಚಳಿ ನಲುಗಿದ ಮೈಸೂರು

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ…

31 mins ago