ರಾಜ್ಯ

ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಲೀಲಾವತಿಯವರು ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು. ಬಹಳಾ ಮನೋಜ್ಞವಾಗಿ ನಟನೆ ಮಾಡುತ್ತಿದ್ದರು. ನಾನು ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನಮ್ಮ ಕಾಲದಲ್ಲಿ ವರನಟ ಡಾ. ರಾಜ್‌ಕುಮಾರ್‌ ಹಾಗೂ ಲೀಲಾವತಿಯವರ ಜೋಡಿ ಬಹಳಾ ಜನಪ್ರಿಯವಾಗಿತ್ತು. ನಾನು 60-70 ರ ದಶಕದಲ್ಲಿ ನಾನು ವಿಧ್ಯಾರ್ಥಿಯಾಗಿದ್ದಾಗ ಲೀಲಾವತಿಯವರ ಸಿನಿಮಾಗಳನ್ನು ನೋಡಿದ್ದೇನೆ.

ಆಕೆ ಒಬ್ಬ ಪರಿಪೂರ್ಣ ಕಲಾವಿದೆ. ಸಾಮಾಜಿಕ ಪಾತ್ರವಿರಲಿ, ಐತಿಹಾಸಿಕ ಪಾತ್ರವಿರಲಿ ಯಾವುದೇ ಪಾತ್ರ ಕೊಟ್ಟರು ಸಹ ಲೀಲಾಜಾಲವಾಗಿ ನಟನೆ ಮಾಡುತ್ತಿದ್ದರು. ಭಕ್ತ ಕುಂಬಾರ ಸಿನಿಮಾದಲ್ಲಿನ ಅವರ ಅಭಿನಯವನ್ನು ಮೆಚ್ಚಲೇ ಬೇಕು. ಅವರ ಸಾವು ನನಗೆ ದುಖಃ ತಂದಿದೆ ಅವರ ನಿಧನದ ಬಗ್ಗೆ ನನ್ನ ಸಂತಾಪಗಳು ಎಂದಿದ್ದಾರೆ.

ಕಳೆದ ವಾರ ಲೀಲಾವತಿಯವರ ಫಾರ್ಮ್‌ಹೌಸ್‌ ಗೆ ಹೋಗಿ ಆರೋಗ್ಯ ವಿಚಾರಿಸಿದ್ದೆ. ಆಗ ವಿನೋದ್‌ ರಾಜ್‌ ಕೂಡ ಇದ್ದರು. ತಾಯಿ ನಿನ್ನ ಮೇಲೆ ಬಹಳ ಪ್ರೀತಿ ಹೊಂದಿದ್ದರು. ನೀವಿಬ್ಬರೂ ಆದರ್ಶ ತಾಯಿ ಮಗ ಕೊನೆ ಘಳಿಗೆಯಲ್ಲಿ ಚೆನ್ನಾಗಿ ನೋಡಿಕೊಳ್ಳಪ್ಪ ಎಂದು ಹೇಳಿದ್ದೆ. ಏನೇ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೆ. ಆದರೆ ಅವರು ನನ್ನಿಂದ ಏನೂ ಸಹಾಯ ಕೇಳಲಿಲ್ಲ ಎಂದು ಹೇಳಿದರು.

lokesh

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

3 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

6 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

9 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

12 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

12 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

12 hours ago