ರಾಜ್ಯ

ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಲೀಲಾವತಿಯವರು ಯಾವುದೇ ಪಾತ್ರ ಕೊಟ್ಟರು ಅದಕ್ಕೆ ಜೀವ ತುಂಬುತ್ತಿದ್ದರು. ಬಹಳಾ ಮನೋಜ್ಞವಾಗಿ ನಟನೆ ಮಾಡುತ್ತಿದ್ದರು. ನಾನು ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನಮ್ಮ ಕಾಲದಲ್ಲಿ ವರನಟ ಡಾ. ರಾಜ್‌ಕುಮಾರ್‌ ಹಾಗೂ ಲೀಲಾವತಿಯವರ ಜೋಡಿ ಬಹಳಾ ಜನಪ್ರಿಯವಾಗಿತ್ತು. ನಾನು 60-70 ರ ದಶಕದಲ್ಲಿ ನಾನು ವಿಧ್ಯಾರ್ಥಿಯಾಗಿದ್ದಾಗ ಲೀಲಾವತಿಯವರ ಸಿನಿಮಾಗಳನ್ನು ನೋಡಿದ್ದೇನೆ.

ಆಕೆ ಒಬ್ಬ ಪರಿಪೂರ್ಣ ಕಲಾವಿದೆ. ಸಾಮಾಜಿಕ ಪಾತ್ರವಿರಲಿ, ಐತಿಹಾಸಿಕ ಪಾತ್ರವಿರಲಿ ಯಾವುದೇ ಪಾತ್ರ ಕೊಟ್ಟರು ಸಹ ಲೀಲಾಜಾಲವಾಗಿ ನಟನೆ ಮಾಡುತ್ತಿದ್ದರು. ಭಕ್ತ ಕುಂಬಾರ ಸಿನಿಮಾದಲ್ಲಿನ ಅವರ ಅಭಿನಯವನ್ನು ಮೆಚ್ಚಲೇ ಬೇಕು. ಅವರ ಸಾವು ನನಗೆ ದುಖಃ ತಂದಿದೆ ಅವರ ನಿಧನದ ಬಗ್ಗೆ ನನ್ನ ಸಂತಾಪಗಳು ಎಂದಿದ್ದಾರೆ.

ಕಳೆದ ವಾರ ಲೀಲಾವತಿಯವರ ಫಾರ್ಮ್‌ಹೌಸ್‌ ಗೆ ಹೋಗಿ ಆರೋಗ್ಯ ವಿಚಾರಿಸಿದ್ದೆ. ಆಗ ವಿನೋದ್‌ ರಾಜ್‌ ಕೂಡ ಇದ್ದರು. ತಾಯಿ ನಿನ್ನ ಮೇಲೆ ಬಹಳ ಪ್ರೀತಿ ಹೊಂದಿದ್ದರು. ನೀವಿಬ್ಬರೂ ಆದರ್ಶ ತಾಯಿ ಮಗ ಕೊನೆ ಘಳಿಗೆಯಲ್ಲಿ ಚೆನ್ನಾಗಿ ನೋಡಿಕೊಳ್ಳಪ್ಪ ಎಂದು ಹೇಳಿದ್ದೆ. ಏನೇ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೆ. ಆದರೆ ಅವರು ನನ್ನಿಂದ ಏನೂ ಸಹಾಯ ಕೇಳಲಿಲ್ಲ ಎಂದು ಹೇಳಿದರು.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago