ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಪವರ್ ಶೇರಿಂಗ್ ವಿಷಯದ ಬಗ್ಗೆ ಮಾತನಾಡುತ್ತಿಲ್ಲ. ನಿಮ್ಮ ಮಾಧ್ಯಮಗಳಲ್ಲಿ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಅವರ ಅವಧಿ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರೇ ತಾನೇ ರಾಜ್ಯದ ಮುಖ್ಯಮಂತ್ರಿ. ಅವರನ್ನು ಬಿಟ್ಟರೆ ಸಿಎಂ ಅಭ್ಯರ್ಥಿ ಯಾರಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಒಕ್ಕಲಿಗ ಸಂಘದವರು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜಾತಿ ಅಭಿಮಾನದಿಂದ ಅವರು ಆ ರೀತಿ ಹೇಳುತ್ತಿದ್ದಾರೆ. ಯಾರೇ ಹೇಳಿದ್ರೂ ಹೈಕಮಾಂಡ್ ನಾಯಕರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…