ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು, ಈ ಬೆನ್ನಲ್ಲೇ ಸಿಎಂ ಬದಲಾವಣೆಯ ಕೂಗು ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಏಳು ವರ್ಷಗಳಲ್ಲ ಸಿದ್ದರಾಮಯ್ಯ ಹತ್ತು ವರ್ಷ ಸಿಎಂ ಆಗಿ ಇರುತ್ತಾರೆ. ಹೈಕಮಾಂಡ್ ಸಿದ್ದರಾಮಯ್ಯ ಅವರನನು ಸಿಎಂ ಮಾಡಿದೆ. ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.
ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿಯು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…