somanna (1)
ನವದೆಹಲಿ: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟು ಕೊಡುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಈ ಬಾರಿ ಅತೀ ಹೆಚ್ಚು ಮಳೆಯಾಗಿರುವುದರಿಂದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳೆಲ್ಲಾ ಹಾಳಾಗಿರುವುದರಿಂದ ಜನರು ಸರಿಯಾಗಿ ಸಂಚಾರ ಮಾಡದೇ ಪರದಾಟ ನಡೆಸುತ್ತಿದ್ದಾರೆ. ಮೊದಲು ಇಂತಹ ವಿಷಯಗಳ ಬಗ್ಗೆ ಗಮನಹರಿಸಬೇಕು. ಇದನ್ನು ಬಿಟ್ಟು ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಇದನ್ನು ಓದಿ: ಡಿಕೆಶಿಗೆ ಸಿಎಂ ಹುದ್ದೆ ಹಂಬಲ; ಅದಕ್ಕಿಲ್ಲ ಸಮರ್ಪಕ ಬಲ
ಇನ್ನು ಮುಂದುವರಿದು ಮಾತನಾಡಿದ ಅವರು, ನಮಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಬಿಟ್ಟುಕೊಡುತ್ತಾರೆ. ಈ ಬಗ್ಗೆ ಜನರು ಕೂಡ ಮಾತನಾಡುತ್ತಿದ್ದಾರೆ. ಈ ಮಧ್ಯೆ ಹುಸಿಬಾಂಬ್ಗಳನ್ನು ಹಾಕಿಕೊಂಡು ರಾಜ್ಯದ ಜನತೆಯನ್ನು ಕತ್ತಲೆ ಕೋಣೆಯಲ್ಲಿ ಇರಿಸುವ ಕೆಲಸ ಬಿಟ್ಟುಬಿಡಿ ಎಂದು ಹರಿಹಾಯ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…