ಶಿವಮೊಗ್ಗ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ ; ಭಾರತ-ಪಾಕಿಸ್ತಾನ ಕ್ರಿಕೆಟ್ ರದ್ದು ಮಾಡಬೇಕಿತ್ತು: ಸಂಸದ ಬಸವರಾಜ ಬೊಮ್ಮಾಯಿ
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣಿಸುತ್ತಿಲ್ಲ. ಕೇರಳದ ಆನೆಯಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮದ್ದೂರಿನಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ. ಆದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಅಂದರೆ ಅದಕ್ಕೆ ಸಿಎಂ ಸಿದ್ದರಾಮಯ್ಯ ಅಹಂಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…