ರಾಜ್ಯ

ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಕೇಶ್‌ ಸಿದ್ಧತೆ?

ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಕೇಶ್‌ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ರಾಜಕೀಯದ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಳೆದ ಆಗಸ್ಟ್.8ರಂದು, ನಮ್ಮ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.

ಇದನ್ನು ಓದಿ: ಮೈಸೂರಲ್ಲಿ ಸರಣಿ ಕೊಲೆ : ನಾಳೆ ಅಧಿಕಾರಿಗಳ ಸಭೆ ಕರೆದ ಸಿಎಂ

ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್‌ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.

ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

4 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

16 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

32 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago