ರಾಜ್ಯ

ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಕೇಶ್‌ ಸಿದ್ಧತೆ?

ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಕೇಶ್‌ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ರಾಜಕೀಯದ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಳೆದ ಆಗಸ್ಟ್.8ರಂದು, ನಮ್ಮ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.

ಇದನ್ನು ಓದಿ: ಮೈಸೂರಲ್ಲಿ ಸರಣಿ ಕೊಲೆ : ನಾಳೆ ಅಧಿಕಾರಿಗಳ ಸಭೆ ಕರೆದ ಸಿಎಂ

ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್‌ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.

ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

2 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

2 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

2 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

2 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

2 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

2 hours ago