ರಾಜ್ಯ

ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಕೇಶ್‌ ಸಿದ್ಧತೆ?

ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಕೇಶ್‌ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ರಾಜಕೀಯದ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಳೆದ ಆಗಸ್ಟ್.8ರಂದು, ನಮ್ಮ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.

ಇದನ್ನು ಓದಿ: ಮೈಸೂರಲ್ಲಿ ಸರಣಿ ಕೊಲೆ : ನಾಳೆ ಅಧಿಕಾರಿಗಳ ಸಭೆ ಕರೆದ ಸಿಎಂ

ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್‌ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.

ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago