ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ರಾಜಕೀಯದ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಳೆದ ಆಗಸ್ಟ್.8ರಂದು, ನಮ್ಮ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.
ಇದನ್ನು ಓದಿ: ಮೈಸೂರಲ್ಲಿ ಸರಣಿ ಕೊಲೆ : ನಾಳೆ ಅಧಿಕಾರಿಗಳ ಸಭೆ ಕರೆದ ಸಿಎಂ
ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.
ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…