ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ನೀಡುವ ಬಗ್ಗೆ ಹೇಳಿಕೊಡಬೇಕಿಲ್ಲ. ಯಾರು ಒತ್ತಡ ಹಾಕೋದು ಬೇಕಾಗಿಲ್ಲ. ನಮ್ಮ ಕರ್ತವ್ಯ ನಾವು ಮಾಡ್ತೀವಿ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಸರ್ಕಾರ ಅಂದು ರಜೆ ಘೋಷಿಸಬೇಕು ಎಂದು ಬಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಒತ್ತಡ ಹಾಕಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ನಾವು ನಮ್ಮ ಭಕ್ತಿ, ನಮ್ಮ ಗೌರವ, ನಮ್ಮ ಧರ್ಮ ಪ್ರಚಾರಕ್ಕೆ ನಾವು ಏನು ಮಾಡಲ್ಲ. ನಮ್ಮ ಭಾವನೆ ಇದೆಯಲ್ಲ. ನಮ್ಮ ಮಂತ್ರಿಗಳೇ ಎಲ್ಲಾ ದೇವಸ್ಥಾನಗಳಲ್ಲಿ ಮಾಡಬೇಕಾದ ಆಚರಣೆಗಳಿಗೆ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.
ಪೂಜೆ, ಪುನಸ್ಕಾರ ಏನು ಮಾಡಬೇಕೋ ಆ ಕೆಲಸ ಮಾಡ್ತಿದ್ದೇವೆ. ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಅಂತ ಹೇಳಿರುವುದಾಗಿ ಸರ್ಕಾರದಿಂದ ರಜೆ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…