ರಾಜ್ಯ

ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ; ಎಚ್ ಡಿಕೆ

ಬೆಂಗಳೂರು : ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ ಮತ್ತುಇಡಿ ವಾಲ್ಮೀಕಿ ನಿಗಮ ಹಗರಣವನ್ನು ತನಿಖೆ ನಡೆಸುತ್ತಿರುವುದನ್ನ ಮತ್ತು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರು ನಾಗೇಂದ್ರ ಮೇಲೆ ತನಿಖಾಧಿಕಾರಿಗಳು ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿ ಸಿದ್ದರಾಮಯ್ಯ ಸರ್ಕಾರ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಈ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಎಚ್‌ ಡಿಕೆ, ಯಾವನೋ ಒಬ್ಬ ಎಂಡಿ ಕೈಯಲ್ಲಿ ಇಡಿ ವಿರುದ್ಧ ದೂರು ಕೊಡಿಸಿ FIR ಮಾಡಿಸಿದ್ದಾರೆ. ಸರ್ಕಾರದ ಕ್ರಿಮಿನಲ್‌ ಮೈಂಡ್‌ ಸೆಟ್‌ ತನಗೆ ಎಲ್ಲರಿಗಿಂತ ಚೆನ್ನಾಗಿ ಗೊತ್ತಿದೆ.  ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಖಂಡಿತ ಇಲ್ಲ. ದೇವೇಗೌಡರ ಕುಟುಂಬ ನಾಶ ಮಾಡುವುದಕ್ಕೋಸ್ಕರ ವಕೀಲ ದೇವರಾಜೇಗೌಡ ನಿರಾಕರಿಸಿದಾಗ ಅವರ ವಿರುದ್ಧ ಸುಳ್ಳು ಕೇಸ್‌ ಹಾಕಿಸಿ ಅರೆಸ್ಟ್‌ ಮಾಡಿಸಿದ್ದು, ಎಲ್ಲಾ ಗೊತ್ತಿದೆ. ಇಂಥ ಸರ್ಕಾರಕ್ಕೆ ಅಧಿಕಾರ ದುರುಪಯೋಗದ ಬಗ್ಗೆ ಧರಣಿ ನಡೆಸುವ ನೈತಿಕತೆ ಇದೆಯೇ ಎಂದು ಖಾರವಾಗಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

40 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago