ರಾಜ್ಯ

ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ; ಎಚ್ ಡಿಕೆ

ಬೆಂಗಳೂರು : ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ ಮತ್ತುಇಡಿ ವಾಲ್ಮೀಕಿ ನಿಗಮ ಹಗರಣವನ್ನು ತನಿಖೆ ನಡೆಸುತ್ತಿರುವುದನ್ನ ಮತ್ತು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರು ನಾಗೇಂದ್ರ ಮೇಲೆ ತನಿಖಾಧಿಕಾರಿಗಳು ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿ ಸಿದ್ದರಾಮಯ್ಯ ಸರ್ಕಾರ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಈ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಎಚ್‌ ಡಿಕೆ, ಯಾವನೋ ಒಬ್ಬ ಎಂಡಿ ಕೈಯಲ್ಲಿ ಇಡಿ ವಿರುದ್ಧ ದೂರು ಕೊಡಿಸಿ FIR ಮಾಡಿಸಿದ್ದಾರೆ. ಸರ್ಕಾರದ ಕ್ರಿಮಿನಲ್‌ ಮೈಂಡ್‌ ಸೆಟ್‌ ತನಗೆ ಎಲ್ಲರಿಗಿಂತ ಚೆನ್ನಾಗಿ ಗೊತ್ತಿದೆ.  ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಖಂಡಿತ ಇಲ್ಲ. ದೇವೇಗೌಡರ ಕುಟುಂಬ ನಾಶ ಮಾಡುವುದಕ್ಕೋಸ್ಕರ ವಕೀಲ ದೇವರಾಜೇಗೌಡ ನಿರಾಕರಿಸಿದಾಗ ಅವರ ವಿರುದ್ಧ ಸುಳ್ಳು ಕೇಸ್‌ ಹಾಕಿಸಿ ಅರೆಸ್ಟ್‌ ಮಾಡಿಸಿದ್ದು, ಎಲ್ಲಾ ಗೊತ್ತಿದೆ. ಇಂಥ ಸರ್ಕಾರಕ್ಕೆ ಅಧಿಕಾರ ದುರುಪಯೋಗದ ಬಗ್ಗೆ ಧರಣಿ ನಡೆಸುವ ನೈತಿಕತೆ ಇದೆಯೇ ಎಂದು ಖಾರವಾಗಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…

3 hours ago

ಜೂ.13ರಂದು ಡೋರ‍್ನಹಳ್ಳಿಯಲ್ಲಿ ಸಂತ ಅಂತೋಣಿ ಜಾತ್ರೆ

ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವವಿಖ್ಯಾತ…

3 hours ago

ಕೋಟೆಗೆ 15ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ

ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…

3 hours ago

ಬುಡಕಟ್ಟು ಜೀವನ ಬಿಚ್ಚಿಡುವ ಮ್ಯೂಸಿಯಂ!

ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…

3 hours ago

ಕಲಾಕೃತಿ ಮೂಲಕ ತ್ಯಾಜ್ಯ ನಿರ್ವಹಣಾ ಜಾಗೃತಿ

ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…

3 hours ago