Sigandur Cable Bridge
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕುಟವೊಂದು ಸೇರ್ಪಡೆಯಾಗಲಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಐತಿಹಾಸಿಕ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ ನಾಳೆ ಲೋಕಾರ್ಪಣೆಯಾಗಲಿದೆ.
ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ-ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸಿದ್ದರು.
ಹೀಗಾಗಿ 2019ರಲ್ಲಿ ಕೇಬಲ್ ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ ವೆಚ್ಚದ ಕಾಮಗಾರಿಯನ್ನು ಉದ್ಘಾಟನೆ ಮಾಡಿದ್ದರು.
2020ರ ಡಿಸೆಂಬರ್ನಲ್ಲಿ ಪ್ರಾರಂಭಗೊಂಡಿದ್ದ ಕಾಮಗಾರಿಯು ಅಂತ್ಯಗೊಂಡಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಈ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಸೇತುವೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಹಾಗೂ ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸಲಿದೆ. 2.24 ಕಿ.ಮೀ ಉದ್ದದ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ ಆಧಾರಿತ ಸೇತುವೆ ಇದಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…