ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ.
ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ , ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಬಿಬಿಎಂಪಿ ಕಲ್ಯಾಣ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧವಾಗಿ ೯ ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.
ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಿ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಇನ್ನು ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…