ರಾಜ್ಯ

ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಬೆಳಕಿಗೆ : ೯ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ.

ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ , ಸಹಕಾರಿ ಸಂಘ, ಕೋ ಆಪರೇಟಿವ್‌ ಸೊಸೈಟಿಗಳಿಗೆ ಬಿಬಿಎಂಪಿ ಕಲ್ಯಾಣ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧವಾಗಿ ೯ ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.

ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಿ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಇನ್ನು ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 min ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

6 mins ago

ಅರಣ್ಯದಲ್ಲಿ ಮಾನವನ ಹಸ್ತಕ್ಷೇಪ; ನಗರಕ್ಕೂ ಚಿರತೆ ದಾಂಗುಡಿ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…

19 mins ago

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

10 hours ago