michael fernandes
ಬೆಂಗಳೂರು : ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದ್ ಮಜ್ದೂರ್, ಕಿಸಾನ್ ಪಂಚಾಯತ್ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಮಿಕ ನಾಯಕ, ಮಾಜಿ ಶಾಸಕ ಮೈಕೆಲ್ ಫರ್ನಾಂಡೀಸ್ ಅವರ 92ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮೈಕೆಲ್ ಮತ್ತು ಪತ್ನಿ ಡೋನಾ ಫರ್ನಾಂಡೀಸ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಇಂತಹ ಸಮಾಜವಾದಿ ವ್ಯಕ್ತಿ ಮತ್ತು ವ್ಯಕ್ತಿತ್ವಗಳು ಬಹಳ ಅಪರೂಪ. ಕಾರ್ಮಿಕ ಸಚಿವರಾಗುವ ಅವಕಾಶ ಮನೆ ಬಾಗಿಲಿಗೆ ಹುಡುಕಿಕೊಂಡು ಹೋದರೂ, ಸಚಿವರಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಸಚಿವ ಸ್ಥಾನ ತಿರಸ್ಕರಿಸಿ ಹೋರಾಟ ಮಾರ್ಗದಲ್ಲೇ ಮುಂದುವರೆದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಲಿತರು, ರೈತರು, ಕಾರ್ಮಿಕರ ಹಿತಸಕ್ತಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಬಂದಿದ್ದೇನೆ. ಹೋರಾಟ ರಾಜಕಾರಣದಲ್ಲಿ ಅತೀ ಅಪರೂಪದ ವ್ಯಕ್ತಿತ್ವ ಮೈಕೆಲ್ ದಂಪತಿಯವರದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…