ರಾಜ್ಯ

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧನೆ : ಕ್ಷಮೆ ಕೇಳುವಂತೆ ಬುಡಕಟ್ಟು ಜನಾಂಗದಿಂದ ಸಿಎಂಗೆ ಪತ್ರ!

ಹುಣಸೂರು : ದೇಶದ ರಾಷ್ಟ್ರಪತಿ ದ್ರೌತಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಸಂಬೋಧಿಸಿದ್ದನ್ನು ವಿರೋಧಿಸಿ, ಈ ಕೂಡಲಿ ಕ್ಷಮೆ ಕೇಳುವಂತೆ ಹುಣಸೂರು ಬುಡಕಟ್ಟು ಜನಾಂಗದವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತ ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಏಕವಚನದಲ್ಲಿ ಸಂಬೋಧಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ.

ಆದಿವಾಸಿಗಳಾದ ನಾವು ತಮ್ಮನ್ನು ಗೌರವದಿಂದ ಕಾಣುತ್ತೇವೆ. ಸಿದ್ದರಾಮಯ್ಯನವರು ಎಂದರೇ ಸಾಮಾಜಿಕ ನ್ಯಾಯ ಪ್ರತಿಪಾಧಿಸುವ ನಾಯಕ ಎಂದು ನಾವು ಭಾವಿಸಿದ್ದೇವೆ. ಆದರೆ ತಾವು ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು

ಏಕವಚನದಲ್ಲಿ ಸಂಬೋಧಿಸಿ ತಮ್ಮ ಭಾಷಣದಲ್ಲಿ ನಮಗೆಲ್ಲರಿಗೂ ಅಪಮಾನ ಮಾಡಿದ್ದೀರಿ. ಸಂವಿಧಾನದ ಹೆಸರಿನಲ್ಲಿ ಅಧಿಕಾರ ನಡೆಸುವ ತಾವು ಘನತೆಯ ಸ್ಥಾನದಲ್ಲಿ ಇರುವಿರಿ.

ಇಂಥವರು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಸಂಬೋಧಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಶಿಷ್ಠಾಚಾರಕ್ಕೆ ವಿರುದ್ಧವಾಗಿದೆ. ತಾವು ತಮ್ಮ ನಡವಳಿಯನ್ನು ತಿದ್ದಿಕೊಳ್ಳಬೇಕು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಕೂಡಲೇ ರಾಷ್ಟ್ರಪತಿಗಳನ್ನು ಹಾಗೂ ಕರ್ನಾಟಕ ಜನತೆಯ ಕ್ಷಮೆಯನ್ನು ಸಾರ್ವಜನಿಕವಾಗಿ ಕೇಳಬೇಕೆಂದು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ.ರಾಮು, ರಾಜ್ಯ ಕಾನೂನು ಸೇವಾ ಆಯೋಗದ ಮಾಜಿ ಸದಸ್ಯ ಬಿ.ಎಸ್.ವಿಠಲ್ ನಾಣಚ್ಚಿ ಹಾಗೂ ಆದಿವಾಸಿ ಮಹಿಳಾ ಮುಖಂಡರು ಬೊಮ್ಮಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಅಲ್ಲದೆ ೨ನೇ ಭಾರಿಗೆ ಮುಖ್ಯಮಂತ್ರಿಯಾಗಿರುವ ತಾವು ಕಾಡಿನಿಂದ ಹೊರ ಹಾಕಿರುವ ೩೪೧೮ ಆದಿವಾಸಿ ಕುಟುಂಬಗಳಿಗೆ ಪುರ್ನವಸತಿ ನೀಡಬೇಕೆಂದು ಹೈಕೋರ್ಟ್ ಆದೇಶ ನೀಡಿ ದಶಕವೇ ಆಗಿದ್ದರೂ ಅದನ್ನು ಕೂಡ ಜಾರಿಗೊಳಿಸದೆ ೩೪೧೮ ಆದಿವಾಸಿ ಕುಟುಂಬಗಳಿಗೆ ನ್ಯಾಯ ನೀಡುವಲ್ಲಿ ಹಿಂದೆ ಬಿದ್ದಿದ್ದೀರಿ. ಆದಿವಾಸಿಗಳ ಬಗ್ಗೆ ಗೌರವ ಹೊಂದಿ ತಮ್ಮ ಕರ್ತವ್ಯ ಸರಿಯಾಗಿ ಪಾಲಿಸಿ ಎಂದು ಆಗ್ರಹಿಸಿದ್ದಾರೆ.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

5 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

6 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

6 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

6 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago