ರಾಜ್ಯ

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧನೆ : ಕ್ಷಮೆ ಕೇಳುವಂತೆ ಬುಡಕಟ್ಟು ಜನಾಂಗದಿಂದ ಸಿಎಂಗೆ ಪತ್ರ!

ಹುಣಸೂರು : ದೇಶದ ರಾಷ್ಟ್ರಪತಿ ದ್ರೌತಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಸಂಬೋಧಿಸಿದ್ದನ್ನು ವಿರೋಧಿಸಿ, ಈ ಕೂಡಲಿ ಕ್ಷಮೆ ಕೇಳುವಂತೆ ಹುಣಸೂರು ಬುಡಕಟ್ಟು ಜನಾಂಗದವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತ ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಏಕವಚನದಲ್ಲಿ ಸಂಬೋಧಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ.

ಆದಿವಾಸಿಗಳಾದ ನಾವು ತಮ್ಮನ್ನು ಗೌರವದಿಂದ ಕಾಣುತ್ತೇವೆ. ಸಿದ್ದರಾಮಯ್ಯನವರು ಎಂದರೇ ಸಾಮಾಜಿಕ ನ್ಯಾಯ ಪ್ರತಿಪಾಧಿಸುವ ನಾಯಕ ಎಂದು ನಾವು ಭಾವಿಸಿದ್ದೇವೆ. ಆದರೆ ತಾವು ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು

ಏಕವಚನದಲ್ಲಿ ಸಂಬೋಧಿಸಿ ತಮ್ಮ ಭಾಷಣದಲ್ಲಿ ನಮಗೆಲ್ಲರಿಗೂ ಅಪಮಾನ ಮಾಡಿದ್ದೀರಿ. ಸಂವಿಧಾನದ ಹೆಸರಿನಲ್ಲಿ ಅಧಿಕಾರ ನಡೆಸುವ ತಾವು ಘನತೆಯ ಸ್ಥಾನದಲ್ಲಿ ಇರುವಿರಿ.

ಇಂಥವರು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಸಂಬೋಧಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಶಿಷ್ಠಾಚಾರಕ್ಕೆ ವಿರುದ್ಧವಾಗಿದೆ. ತಾವು ತಮ್ಮ ನಡವಳಿಯನ್ನು ತಿದ್ದಿಕೊಳ್ಳಬೇಕು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಕೂಡಲೇ ರಾಷ್ಟ್ರಪತಿಗಳನ್ನು ಹಾಗೂ ಕರ್ನಾಟಕ ಜನತೆಯ ಕ್ಷಮೆಯನ್ನು ಸಾರ್ವಜನಿಕವಾಗಿ ಕೇಳಬೇಕೆಂದು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ.ರಾಮು, ರಾಜ್ಯ ಕಾನೂನು ಸೇವಾ ಆಯೋಗದ ಮಾಜಿ ಸದಸ್ಯ ಬಿ.ಎಸ್.ವಿಠಲ್ ನಾಣಚ್ಚಿ ಹಾಗೂ ಆದಿವಾಸಿ ಮಹಿಳಾ ಮುಖಂಡರು ಬೊಮ್ಮಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಅಲ್ಲದೆ ೨ನೇ ಭಾರಿಗೆ ಮುಖ್ಯಮಂತ್ರಿಯಾಗಿರುವ ತಾವು ಕಾಡಿನಿಂದ ಹೊರ ಹಾಕಿರುವ ೩೪೧೮ ಆದಿವಾಸಿ ಕುಟುಂಬಗಳಿಗೆ ಪುರ್ನವಸತಿ ನೀಡಬೇಕೆಂದು ಹೈಕೋರ್ಟ್ ಆದೇಶ ನೀಡಿ ದಶಕವೇ ಆಗಿದ್ದರೂ ಅದನ್ನು ಕೂಡ ಜಾರಿಗೊಳಿಸದೆ ೩೪೧೮ ಆದಿವಾಸಿ ಕುಟುಂಬಗಳಿಗೆ ನ್ಯಾಯ ನೀಡುವಲ್ಲಿ ಹಿಂದೆ ಬಿದ್ದಿದ್ದೀರಿ. ಆದಿವಾಸಿಗಳ ಬಗ್ಗೆ ಗೌರವ ಹೊಂದಿ ತಮ್ಮ ಕರ್ತವ್ಯ ಸರಿಯಾಗಿ ಪಾಲಿಸಿ ಎಂದು ಆಗ್ರಹಿಸಿದ್ದಾರೆ.

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

7 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

8 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

9 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

9 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago