ರಾಜ್ಯ

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧನೆ : ಕ್ಷಮೆ ಕೇಳುವಂತೆ ಬುಡಕಟ್ಟು ಜನಾಂಗದಿಂದ ಸಿಎಂಗೆ ಪತ್ರ!

ಹುಣಸೂರು : ದೇಶದ ರಾಷ್ಟ್ರಪತಿ ದ್ರೌತಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಸಂಬೋಧಿಸಿದ್ದನ್ನು ವಿರೋಧಿಸಿ, ಈ ಕೂಡಲಿ ಕ್ಷಮೆ ಕೇಳುವಂತೆ ಹುಣಸೂರು ಬುಡಕಟ್ಟು ಜನಾಂಗದವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತ ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಏಕವಚನದಲ್ಲಿ ಸಂಬೋಧಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ.

ಆದಿವಾಸಿಗಳಾದ ನಾವು ತಮ್ಮನ್ನು ಗೌರವದಿಂದ ಕಾಣುತ್ತೇವೆ. ಸಿದ್ದರಾಮಯ್ಯನವರು ಎಂದರೇ ಸಾಮಾಜಿಕ ನ್ಯಾಯ ಪ್ರತಿಪಾಧಿಸುವ ನಾಯಕ ಎಂದು ನಾವು ಭಾವಿಸಿದ್ದೇವೆ. ಆದರೆ ತಾವು ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು

ಏಕವಚನದಲ್ಲಿ ಸಂಬೋಧಿಸಿ ತಮ್ಮ ಭಾಷಣದಲ್ಲಿ ನಮಗೆಲ್ಲರಿಗೂ ಅಪಮಾನ ಮಾಡಿದ್ದೀರಿ. ಸಂವಿಧಾನದ ಹೆಸರಿನಲ್ಲಿ ಅಧಿಕಾರ ನಡೆಸುವ ತಾವು ಘನತೆಯ ಸ್ಥಾನದಲ್ಲಿ ಇರುವಿರಿ.

ಇಂಥವರು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಸಂಬೋಧಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಶಿಷ್ಠಾಚಾರಕ್ಕೆ ವಿರುದ್ಧವಾಗಿದೆ. ತಾವು ತಮ್ಮ ನಡವಳಿಯನ್ನು ತಿದ್ದಿಕೊಳ್ಳಬೇಕು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಕೂಡಲೇ ರಾಷ್ಟ್ರಪತಿಗಳನ್ನು ಹಾಗೂ ಕರ್ನಾಟಕ ಜನತೆಯ ಕ್ಷಮೆಯನ್ನು ಸಾರ್ವಜನಿಕವಾಗಿ ಕೇಳಬೇಕೆಂದು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ.ರಾಮು, ರಾಜ್ಯ ಕಾನೂನು ಸೇವಾ ಆಯೋಗದ ಮಾಜಿ ಸದಸ್ಯ ಬಿ.ಎಸ್.ವಿಠಲ್ ನಾಣಚ್ಚಿ ಹಾಗೂ ಆದಿವಾಸಿ ಮಹಿಳಾ ಮುಖಂಡರು ಬೊಮ್ಮಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಅಲ್ಲದೆ ೨ನೇ ಭಾರಿಗೆ ಮುಖ್ಯಮಂತ್ರಿಯಾಗಿರುವ ತಾವು ಕಾಡಿನಿಂದ ಹೊರ ಹಾಕಿರುವ ೩೪೧೮ ಆದಿವಾಸಿ ಕುಟುಂಬಗಳಿಗೆ ಪುರ್ನವಸತಿ ನೀಡಬೇಕೆಂದು ಹೈಕೋರ್ಟ್ ಆದೇಶ ನೀಡಿ ದಶಕವೇ ಆಗಿದ್ದರೂ ಅದನ್ನು ಕೂಡ ಜಾರಿಗೊಳಿಸದೆ ೩೪೧೮ ಆದಿವಾಸಿ ಕುಟುಂಬಗಳಿಗೆ ನ್ಯಾಯ ನೀಡುವಲ್ಲಿ ಹಿಂದೆ ಬಿದ್ದಿದ್ದೀರಿ. ಆದಿವಾಸಿಗಳ ಬಗ್ಗೆ ಗೌರವ ಹೊಂದಿ ತಮ್ಮ ಕರ್ತವ್ಯ ಸರಿಯಾಗಿ ಪಾಲಿಸಿ ಎಂದು ಆಗ್ರಹಿಸಿದ್ದಾರೆ.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago