ರಾಜ್ಯ

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದಲ್ಲೂ ಇದು ತುರ್ತಾಗಿ ನಡೆಯುವ ಅಗತ್ಯವಿದೆ ಎಂದು ಹೇಳಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್ಐಆರ್ ಬಂದರೆ ನಿಜವಾದ ಮತದಾರರು ಯಾರು, ಅವರು ಎಲ್ಲಿಂದ ಬಂದವರು, ಅವರ ಹಿನ್ನೆಲೆ ಏನು ಎಂಬುದು ಸೇರಿದಂತೆ ಎಲ್ಲಾ ವಿವರಗಳೂ ಲಭ್ಯವಾಗುತ್ತವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಆದಷ್ಟು ಶೀಘ್ರ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದರು.

ರಾಜಧಾನಿ ಬೆಂಗಳೂರಿಗೆ ಹೊರ ರಾಜ್ಯಗಳು ಹಾಗೂ ಬೇರೆ ದೇಶಗಳಿಂದ ಬಂದು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ಪಡೆದುಕೊಂಡಿರುವವರನ್ನು ತಕ್ಷಣವೇ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ‌

ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬಂದು ನಗರದ ಅನೇಕ ಕಡೆ ನೆಲೆಸಿದ್ದಾರೆ. ಕೆಲವು ಕಡೆ ರೋಹಿಂಗ್ಯಾಗಳು ಕೂಡ ಇದ್ದಾರೆ. ಅವರನ್ನು ಪತ್ತೆ ಮಾಡಿ ಇವರ ಬಳಿ ಇರುವ ಗುರುತಿನ ಚೀಟಿಗಳನ್ನು ವಿಚಾರಣೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ಹೊರದೇಶಗಳು ಮತ್ತು ಬೇರೆ ರಾಜ್ಯಗಳಿಂದ ಬಂದವರಿಗೆ ಕೆಲವರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿ ಕೊಟ್ಟಿದ್ದಾರೆ. ಇದು ದುರುಪಯೋಗವಾಗುವ ಸಾಧ್ಯತೆ ಇದೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತರು ತಕ್ಷಣವೇ ಪರಿಶೀಲಿಸಿ ವಶಕ್ಕೆ ಪಡೆಯಬೇಕೆಂದು ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago