ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ಮಾಸ್ಕ್‌ ಮ್ಯಾನ್‌ ಅರೆಸ್ಟ್‌

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್‌ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

ಬಳಿಕ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಲಿದ್ದು, ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಆರೋಪದಂತೆ ಎಸ್‌ಐಟಿ ಅಧಿಕಾರಿಗಳು ಆತ ತೋರಿಸಿದ ಸ್ಥಳಗಳನ್ನು ಅಗೆದು ಶೋಧ ಕಾರ್ಯ ನಡೆಸಿದ್ದರು. ಎರಡು ಸ್ಥಳಗಳಲ್ಲಿ ಒಂದೆಡೆ ಅಸ್ಥಿಪಂಜರ ಸಿಕ್ಕಿದ್ದರೆ, ಮತ್ತೊಂದು ಜಾಗದಲ್ಲಿ ಮಾನವನ ಮೂಳೆಗಳು ಸಿಕ್ಕಿದ್ದವು.

ಬಳಿಕ ಎಸ್‌ಐಟಿ ಅಧಿಕಾರಿಗಳು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸಿದ್ದರು. ನಂತರ ಮಾಸ್ಕ್‌ ಮ್ಯಾನ್‌ನನ್ನು ವಿಚಾರಗಣೆಗೆ ಒಳಪಡಿಸಲಾಗಿತ್ತು. ಈ ಮಧ್ಯೆ ಧರ್ಮಸ್ಥಳದಲ್ಲಿ ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಮಂಡ್ಯದ ವ್ಯಕ್ತಿ ಮಾಹಿತಿ ಬಿಚ್ಚಿಟ್ಟಿದ್ದರು. ದೂರುದಾರು ಚಿನ್ನಯ್ಯ ಹೇಳುತ್ತಿರುವುದೆಲ್ಲಾ ಸುಳ್ಳು ಎಂದು ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

9 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

10 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

11 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago